ರಾಯಚೂರು ವಿವಿಗೆ ನಯಾ ಪೈಸೆ ನೀಡದ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಉದ್ಘಾಟನೆ ನಾಟಕ ಮಾಡುತ್ತಿದ್ದದು ನಾಚಿಕೆಗೇಡು



ಉಪ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ
UDAYAVANI NEWS 
ರಾಯಚೂರು,ಮಾರ್ಚ್ 28 : ವಿಶ್ವವಿದ್ಯಾಲಯ ವನ್ನು ರಾಜ್ಯದ ಮುಖ್ಯ ಮಂತ್ರಿ ಇಂದು ಉದ್ಘಾಟನೆ ಮಾಡುತ್ತಿರಿವದು ನಾಚಿಗೇಡಿನ‌ ಸಂಗತಿ. ವಿಶ್ವವಿದ್ಯಾಲಯ ಪ್ರಾರಂಭವಾಗಿ ಎರಡು ವರ್ಷವಾದರೂ ನಯಾ ಪೈಸೆ ಅನುದಾನ ನೀಡದ ಸರಕಾರ ಯಾವ ಮುಖವನ್ನಿಟ್ಟುಕೊಂಡು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವಂತಾಗಿದೆ.

ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸುಮಾರು 500 ಕೋ.ರೂ ಅನುದಾನದ ಬೇಡಿಕೆ ಇದ್ದರೂ ಇಲ್ಲಿಯವರೆಗೆ ಒಂದು‌ ಒಂದು ನಯಾ ಪೈಸೆ ಅಭಿವೃದ್ಧಿ ಅನುದಾನ ಬಿಡುಗಡೆಗೊಳಿಸಿಲ್ಲ, ಇಂತಹ ಸಂದರ್ಭದಲ್ಲಿ ಚುನಾವಣೆ ದೃಷ್ಟಿಯಿಂದ ಉದ್ಘಾಟನೆ ಮಾಡುತ್ತಿರುವದು ಹಾಸ್ಯಾಸ್ಪದವಾಗಿದೆ.

ಸುಮಾರು 250 ಎಕರೆ ಜಮೀನು ಇರುವ ರಾಯಚೂರು ವಿಶ್ವವಿದ್ಯಾಲಯದ 23 ಸ್ನಾತಕೋತ್ತರ ಕೋರ್ಸಗಳಿದ್ದು ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಕ್ಯಾಂಪಸ್ ಒಳಗಡೆಯೇ ಉನ್ನತ ವ್ಯಾಸಂಗ್ ಪಡೆಯುತ್ತಿದ್ದಾರೆ, ಆ ವಿದ್ಯಾರ್ಥಿಗಳಿಗೆ ಸೂಕ್ತ ಮೂಲಭೂತ ಸೌಕರ್ಯಗಳಿಲ್ಲ, ಅವುಗಳನ್ನು ಒದಗಿಸುವದು ಬಿಟ್ಟು ಕಾಟಾಚಾರದ ಉದ್ಘಾಟನೆ ಯಾವ ಪುರುಷಾರ್ಥಕ್ಕೆ ಎಂದು ತಿಳಿಯದಾಗಿದೆ.

ಕಾರಣ, ಮುಖ್ಯ ಮಂತ್ರಿಗಳಿಗೆ ಈ‌ ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿ ಕುರಿತು ಕಾಳಜಿ ಇದ್ದಲ್ಲಿ ತಕ್ಷಣ ವಿಶ್ವವಿದ್ಯಾಲಯದ ಬೇಡಿಕೆಯಂತೆ ಅನುದಾನ ಬಿಡುಗಡೆ ಹಾಗೂ ಹುದ್ದೆಗಳ ಮಂಜೂರಾತಿ ಮಾಡಬೇಕೆಂದು ಆಗ್ರಹಿಸುತ್ತೇನೆ.

Post a Comment

Previous Post Next Post